ಈ ಗಿಡದ ಉಪಯೋಗ ನಿಮಗೆ ಗೊತ್ತಾ?

Kannada health tips :ನಮ್ಮ ಸುತ್ತ ಮುತ್ತ ಅನೇಕ ಗಿಡಮೂಲಿಕೆಗಳು ಇವೇ.ನಾವು ಇದರ ಬಗ್ಗೆ ಗಮನ ಅರಿಸುವುದಿಲ್ಲ.ನಾವು ಪ್ರತಿನಿತ್ಯ ನಡೆದಾಡುವ ದಾರಿಯಲ್ಲೂ ಸಹ ತುಂಬಾನೇ ಗಿಡಗಳು ಇರುತ್ತವೆ.ಇವತ್ತಿನ ಲೇಖನದಲ್ಲಿ ಅರೋಗ್ಯಕ್ಕೆ ತುಂಬಾನೇ ಲಾಭ ಕೊಡುವ ಒಂದು ಗಿಡದ ಬಗ್ಗೆ ತಿಳಿಸಿಕೊಡುತ್ತೇವೆ. ಈ ಗಿಡದ ಹೆಸರು ಹೊನ್ನಗೊನೆ ಅಥವಾ ಹೊನ್ನಿನ ಗೊನೆ ಅಥವಾ ಹೊನ್ನ ಗೊನ್ನಿ ಅಂತನು ಕರೆಯುತ್ತಾರೆ.ಈ ಗಿಡ ಹೆಚ್ಚಾಗಿ ಕರಾವಳಿ ಭಾಗದಲ್ಲಿ ಹಾಗು ಕೃಷಿ ಭೂಮಿಯಲ್ಲಿ ಬೆಳೆಯುತ್ತದೆ.

ಹೊನ್ನಗೊನೆ ಸೊಪ್ಪಿನಿಂದ ಪಲ್ಯ ಜ್ಯೂಸ್ ಮಾಡಿ ಕುಡಿಯಬಹುದು ಅಥವ ಹಾಗೆ ಕೂಡ ಸೇವನೆ ಮಾಡಬಹುದು. ಹೊನ್ನಗೊನೆ ಸೊಪ್ಪಿನ ವೈಜ್ಞಾನಿಕ ಹೆಸರು ಆಲ್ಟರ್ ನ್ಯಾಂಥೀರ ಸೆಸ್ಸಿಲಿಸ್. ಇದು ಅಮರಾಂಥೇಸಿ ಕುಟುಂಬಕ್ಕೆ ಸೇರಿದ ಸಸ್ಯವಾಗಿದೆ.ಹೊನಗೊನ್ನೆ ಬೇರನ್ನು 2 ತೊಲದಷ್ಟು ತೆಗೆದುಕೊಂಡು ಸೇರು ಆಡಿನ ಹಾಲಿನಲ್ಲಿ ಅರೆದು ಸೋಸಿ ದಿವಸಕ್ಕೂಮ್ಮೆ ಕುಡಿಸುವುದರಿಂದ ಮೂತ್ರವಿಸರ್ಜನೆ ಸಲೀಸಾಗುವುದು.

ಹೊನಗೊನ್ನೆ ಸೊಪ್ಪಿನ ಪಲ್ಯ ಮಾಡಿ ತಿನ್ನುವುದರಿಂದ, ಜ್ವರ ಬಿಟ್ಟ ನಂತರ ರುಚಿಕೆಟ್ಟ ಬಾಯಿಗೆ ರುಚಿಯುಂಟು ಮಾಡುತ್ತದೆ. 8 ದಿನ ಬಿಡದೆ ತಿಂದರೆ ಒಳ್ಳೆಯದು.ಹೊನಗೊನ್ನೆ ಸೊಪ್ಪಿನ ರಸ 2 ತೊಲ, ಮೂಲಂಗಿ ಸೊಪ್ಪಿನ ರಸ 2 ತೊಲ ಮಿಶ್ರ ಮಾಡಿ ಸ್ವಲ್ಪ ಸೈಂಧಲವಣ ಸೇರಿಸಿ ಕುಡಿಯುವುದರಿಂದ ಮೂಲವ್ಯಾಧಿ ನಿವಾರಣೆಯಾಗುತ್ತದೆ.

ಹೊನಗೊನ್ನೆ ಸೊಪ್ಪಿನ ರಸದಲ್ಲಿ ಉತ್ತರಾಣಿ ಬೇರನ್ನು ತೇಯ್ದು ಕಣ್ಣುಗಳಿಗೆ ಹಚ್ಚುವುದರಿಂದ ಕಣ್ಣಿನ ಪೊರೆ ನಿವಾರಣೆಯಾಗುತ್ತದೆ.ಹೊನಗೊನ್ನೆ ಗಿಡದ ಎಲೆ 2 ಹಿಡಿಯಷ್ಟು ತೆಗೆದುಕೊಂಡು ಅದಕ್ಕೆ ಅವರೆಕಾಳು ಗಾತ್ರದ ಆರತಿಕರ್ಪೂರ ಸೇರಿಸಿ ನಯವಾಗಿ ಅರೆದು ಮುಲಾಮಿನಂತೆ ಮಾಡಿಕೊಂಡು ಎಲ್ಲಾ ಬಗೆಯ ಗಾಯಗಳಿಗೆ ಲೇಪನವಾಗಿ ಬಳಸಬಹುದು.

ಹೊನಗೊನ್ನೆ ಬೇರಿನ ರಸ 1 ತೊಲದಷ್ಟು ತೆಗೆದುಕೊಂಡು ಅದಕ್ಕೆ ಸ್ವಲ್ಪ ಬೆಲ್ಲ ತುಪ್ಪ ಸೇರಿಸಿ, ಸ್ತೀಯರು ಕುಡಿಯುವುದರಿಂದ ರಕ್ತಪ್ರದರ ಗುಣವಾಗುತ್ತದೆ. ಇದನ್ನು ದಿವಸಕ್ಕೊಮ್ಮೆಯಂತೆ 3 ದಿವಸ ಕುಡಿಯಬೇಕು.ಹೊನಗೊನ್ನೆ ಬೇರನ್ನು ಆಡಿನ ಹಾಲಿನಲ್ಲಿ ಅರೆದು ಕುಡಿಯುವುದರಿಂದ ಬಹುಮೂತ್ರ ರೋಗ ವಾಸಿಯಾಗುತ್ತದೆ. ಮಕ್ಕಳಲ್ಲಿ ಕಾಣಿಸುವ ಉರಿಮೂತ್ರಕ್ಕೂ ಇದು ಒಳ್ಳೆಯ ಮದ್ದು.

ಹೊನಗೂನ್ನೆ ಸೊಪ್ಪಿನ ಸಾರು ಅಥವಾ ಪಲ್ಯ ಮಾಡಿ ಸೇವಿಸುವುದರಿಂದ ಕಣ್ಣುಗಳ ವ್ಯಾಧಿಗಳು ಬರುವುದಿಲ್ಲ.ಹೊನಗೊನ್ನೆ ಗಿಡವನ್ನು ಬೇರು ಸಹಿತ ಕಿತ್ತು 1 ಸೇರಿನಷ್ಟು ರಸಮಾಡಿಕೂಂಡು ಅದಕ್ಕೆ 1 ಪಾವು ಎಳ್ಳೆಣ್ಣೆ ಹಾಕಿ ಕಾಯಿಸಿ ರಸವೆಲ್ಲ ಇಂಗಿದ ಮೇಲೆ ಇಳಿಸಿಕೂಂಡು ಎಣ್ಣೆಯನ್ನು ಶೋಧಿಸಿ ಇಟ್ಟುಕೂಳ್ಳಬೇಕು. ಈ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಮೆದುಳು ಮತ್ತು ಕಣ್ಣುಗಳ ಉಷ್ಣತೆಯು ಕಡಿಮೆಯಾಗಿ ಬಲ ಮತ್ತು ತೇಜಸ್ಸು ಹೆಚ್ಚಾಗುತ್ತದೆ. ಈ ಎಣ್ಣೆಯನ್ನು ಬೆಂದ ಗಾಯಗಳ ಮೇಲೆ ಕೂಡ ಉಪಯೋಗಿಸಬಹುದು.

Kannada health tips ಹೊನಗೂನ್ನೆ ಸೊಪ್ಪಿನ ರಸವನ್ನು ಒಂದು ಹೆಂಚಿಗೆ ಹಲವು ಸಲ ಸವರಿ ಒಣಗಿಸಿಟ್ಟುಕೊಳ್ಳುವುದು. ಅದರ ಮೇಲೆ ಹಸುವಿನ ತುಪ್ಪ ಹಾಕಿ ಉರಿಸಿದ ದೀಪದಿಂದ ಬರುವ ಕಾಡಿಗೆಯನ್ನು ರಸ ಲೇಪಿಸಿ ಆಗಲೇ ಒಣಗಿಸಿಟ್ಟುಕೂಂಡಿದ್ದ ಹೆಂಚಿನ ಮೇಲೆ ಶೇಖರಿಸಿಕೂಂಡು ಆ ಕಾಡಿಗೆಯನ್ನು ಹಸುವಿನ ತುಪ್ಪದಲ್ಲಿಯೇ ಕಲಸಿ, ಕಾಡಿಗೆಯಾಗಿ ಉಪಯೋಗಿಸುವುದರಿಂದ ಕಣ್ಣುಗಳು ಆರೋಗ್ಯಪೂರ್ಣವಾಗಿರುತ್ತವೆ.

https://youtu.be/H8KF4Yv2bmk

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago