Astrology

ಪದೇ ಪದೇ ನಿಮ್ಮ ಮೇಲೆ ಕೆಟ್ಟ ದೃಷ್ಟಿ ಬೀಳುತ್ತಾ?

ಕೆಲವರ ಕೆಟ್ಟ ದೃಷ್ಟಿ ಬಿದ್ದರೆ ಬಹಳಷ್ಟು ನಷ್ಟವಾಗುತ್ತದೆ. ದೃಷ್ಟಿ ತಟ್ಟಿದರೆ ಎಂಬ ಕಾರಣಕ್ಕೆ ಹಲವಾರು ಮಾರ್ಗೋಪಾಯಗಳನ್ನೂ ಅನುಸರಿಸಲಾಗುತ್ತದೆ. ಮಕ್ಕಳಿಗೆ ದೃಷ್ಟಿ ದಾರವನ್ನು ಕಟ್ಟುವುದು, ಇಲ್ಲವೇ ದೃಷ್ಟಿ ನಿವಾಳಿಸುವುದನ್ನು ಮಾಡಲಾಗುತ್ತದೆ. ಪೂಜಿಸಿ, ಮಂತ್ರಿಸಿದ ತಾಯತ ಇಲ್ಲವೇ ಯಂತ್ರಗಳನ್ನು ಕಟ್ಟುವಂತಹ ಪ್ರಕ್ರಿಯೆಯನ್ನು ಸಹ ಮಾಡಲಾಗುತ್ತದೆ. ಈಗ ಪರಿಹಾರಗಳು ಏನೇನು ಎಂಬುದನ್ನು ನೋಡೋಣ… 

ಕೆಟ್ಟ ದೃಷ್ಟಿ , ಕಣ್ಣು ಬೀಳುವುದು… ಎಂಬ ಪದವನ್ನು ನಾವು ಕೇಳಿರುತ್ತೇವೆ. ಇದಕ್ಕೆ ಹಲವಾರು ಕಾರಣಗಳು ಇರುತ್ತವೆ. ಯಾಕೆಂದರೆ ನೆಮ್ಮದಿಯ ಜೀವನದಲ್ಲಿ ಇದ್ದಕ್ಕಿದ್ದಂತೆ ಅಶಾಂತಿ ಸೃಷ್ಟಿಯಾಗಿಬಿಡುತ್ತದೆ. ಗೆಲುವಿನ ಹಾದಿಯಲ್ಲಿದ್ದಾಗ ಸೋಲಿನ ಭೀತಿ ಕಾಣುತ್ತಾ ಹೋಗುತ್ತದೆ… ವ್ಯಾಪಾರದಲ್ಲಿ ಲಾಭವಾಗುತ್ತಿದ್ದ ಸಮಯದಲ್ಲಿ ನಷ್ಟ ಆಗುತ್ತಾ ಹೋಗುತ್ತದೆ, ಆರೋಗ್ಯವಾಗಿರುವ ಸಂದರ್ಭದಲ್ಲಿ ಅನಾರೋಗ್ಯವು ಕಾಡಲು ಪ್ರಾರಂಭಿಸುತ್ತದೆ.. ಹೀಗೆ ಎಲ್ಲದಕ್ಕೂ ಏನು ಕಾರಣ ಎಂಬುದು ನಮಗೆ ಕೆಲವು ಸಮಯದಲ್ಲಿ ತಿಳಿಯದೇ ಹೋಗುತ್ತದೆ. ಗ್ರಹಗತಿಗಳು ಅಲ್ಪಮಟ್ಟಿಗೆ ಉತ್ತಮವಾಗಿದ್ದರೂ ಹೀಗೇಕೆ ಆಗುತ್ತದೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಂತೆ ಕಾಡುತ್ತಿರುತ್ತದೆ. 

ಇದಕ್ಕೆ ಕಣ್ಣು ಬೀಳುವುದೂ ಒಂದು ಕಾರಣವಾಗಿರುವ ಸಾಧ್ಯತೆ ದಟ್ಟವಾಗಿರುತ್ತದೆ. ಕೆಲವರಿಗೆ ಇನ್ನೊಬ್ಬರ ಏಳ್ಗೆಯನ್ನು ಸಹಿಸಲು ಆಗದು. ಹೀಗಾಗಿ ಅವರ ಅಸೂಯೆಯಿಂದ ಇನ್ನೊಬ್ಬರ ಬೆಳವಣಿಗೆಯನ್ನು ನೋಡುತ್ತಿರುತ್ತಾರೆ. ಅದಕ್ಕೆ ಹೊಟ್ಟೆ ಉರಿಯನ್ನು ಪಟ್ಟುಕೊಳ್ಳುತ್ತಾರೆ. ಹೀಗಾಗಿ ಅವರ ಹೊಟ್ಟೆಕಿಚ್ಚಿನ ನೋಟದಿಂದ ಇತರರಿಗೆ ಕೆಟ್ಟದ್ದಾಗುತ್ತಾ ಹೋಗುತ್ತದೆ. ಹಾಗಾಗಿ ಗರ್ಭವತಿಯಾದವರಿಗೆ, ಪುಟ್ಟ ಮಕ್ಕಳಿಗೆ ಈ ಬಗ್ಗೆ ವಿಶೇಷ ನಿಗಾ ವಹಿಸಲಾಗುತ್ತದೆ. ಈ ದೃಷ್ಟಿದೋಷ ಹೇಗೆ, ಯಾರಿಗೆ ಆಗುತ್ತದೆ ಮತ್ತದಕ್ಕೆ ಪರಿಹಾರೋಪಾಯಗಳು ಏನು ಎಂಬ ಬಗ್ಗೆ ನೋಡೋಣ.

ಪುಟ್ಟ ಮಕ್ಕಳಿಗೆ ದೃಷ್ಟಿ–ಒಂದು ವರ್ಷದೊಳಗಿನ ಪುಟ್ಟ ಮಕ್ಕಳಿಗೆ ಬೇಗ ದೃಷ್ಟಿಯಾಗಲಿದೆ. ಹೀಗೆ ಅವರಿಗೆ ದೃಷ್ಟಿ ತಾಕಿದರೆ, ಹಾಲು ಕುಡಿಯುವುದಿಲ್ಲ. ಅಲ್ಲದೆ, ರಚ್ಚೆ ಹಿಡಿಯುವುದು, ರಾತ್ರಿ ಇಡೀ ನಿದ್ದೆ ಮಾಡದೇ ಇರುವುದು ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ತುತ್ತಾಗುತ್ತವೆ. ಈ ರೀತಿ ಆದಾಗ ಸಾಸಿವೆ, ಉಪ್ಪು ತೆಗೆದುಕೊಂಡು ಆ ಮಗುವಿಗೆ ನಿವಾಳಿಸಿ ಹಾಕಬೇಕು. ಪೂಜಿಸಿದ ಇಲ್ಲವೇ ಮಂತ್ರಿಸಿದ ತಾಯತ ಅಥವಾ ಯಂತ್ರವನ್ನು ಕಪ್ಪುದಾರದಲ್ಲಿ ಕಟ್ಟಿ, ಕುತ್ತಿಗೆಗೆ ಅಥವಾ ಕೈಗೆ ಕಟ್ಟಬೇಕು. ಇದು ಬಹುಬೇಗ ನೋಡುಗರ ದೃಷ್ಟಿಗೆ ಬೀಳುವುದರಿಂದ ಕಟ್ಟಿಸಿಕೊಂಡ ಮಗುವಿಗೆ ದೃಷ್ಟಿ ತಾಕದು. 

ವ್ಯಾಪಾರದಲ್ಲಿ ನಷ್ಟವಾದರೆ–ವ್ಯಾಪಾರ – ವ್ಯವಹಾರದಲ್ಲಿ ಒಳ್ಳೇ ಲಾಭ ಪಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ನಷ್ಟದ ಸುಳಿಗೆ ಸಿಲುಕುತ್ತದೆ. ಇಲ್ಲವೇ ಮಂದಗತಿಯಲ್ಲಿ ಸಾಗುತ್ತದೆ. ಎಷ್ಟೇ ಪ್ರಯತ್ನ ಪಟ್ಟರೂ ಲಾಭ ಕಾಣಲು ಸಾಧ್ಯವಾಗುವುದಿಲ್ಲ. ಇಂಥ ಸಂಕಷ್ಟಕ್ಕೆ ದೃಷ್ಟಿದೋಷ ಸಹ  ಕಾರಣ ಆಗಿರಬಹುದಾಗಿರುತ್ತದೆ. ಇದಕ್ಕೆ ಪರಿಹಾರವಾಗಿ ವ್ಯಾಪಾರದ ಸ್ಥಳದಲ್ಲಿ ನಿಂಬೆ ಹಣ್ಣು ಹಾಗೂ ಮೆಣಸಿಕಾಯಿಯನ್ನು ಕಟ್ಟಬೇಕು. ಇದು ನಿಮ್ಮ ಕಾರ್ಯಕ್ಷೇತ್ರಕ್ಕೆ ಬರುವ ಎಲ್ಲರಿಗೂ ಕಾಣುವಂತೆ ಇರಬೇಕು. 

ಊಟ- ತಿಂಡಿ ಸೇರದು–ಆರೋಗ್ಯ ಉತ್ತಮವಾಗಿಯೇ ಇರುತ್ತದೆ. ಹೊತ್ತಿಂದ ಹೊತ್ತಿಗೆ ಊಟ , ತಿಂಡಿ ಎಲ್ಲವೂ ಸೇರುತ್ತಿರುತ್ತದೆ. ಆದರೆ, ಒಮ್ಮೆಲೆಗೆ ಏನಾಯಿತೋ ಏನೋ..? ಯಾವುದೂ ಸಹ ತಿನ್ನಲು ಬೇಡವಾಗಿಬಿಡುತ್ತದೆ. ತಿನ್ನಲು ಹೋದರೂ ಹಸಿವು ಆಗುತ್ತಿರುವುದಿಲ್ಲ. ಇದರಿಂದ ಅನಾರೋಗ್ಯ ಉಂಟಾಗುತ್ತದೆ. ಇದು ಮಕ್ಕಳಿಗಾದರೂ ಸರಿ, ಹಿರಿಯರಿಗಾದರೂ ಸರಿ. ಕೆಟ್ಟ ದೃಷ್ಟಿ ಬಿದ್ದಾಗ ಹೀಗೆ ಆಗುವ ಸಂಭವ ಹೆಚ್ಚಿರುತ್ತದೆ. ಈ ರೀತಿ ಆಗುತ್ತಿದ್ದರೆ, ಒಂದು ಲೋಟದಲ್ಲಿ ನೀರು ತೆಗೆದುಕೊಂಡು ಏಳು ಬಾರಿ ತಲೆಯ ಮೇಲಿಂದ ನಿವಾಳಿಸಬೇಕು. ಅದನ್ನು ನಾಲ್ಕು ರಸ್ತೆ ಸೇರುವಲ್ಲಿ ಚೆಲ್ಲಿ ತಿರುಗಿ ನೋಡದೇ ವಾಪಸ್ ಬರಬೇಕು.

ಮನೆಗೆ ನೆಗೆಟಿವ್ ಎನರ್ಜಿ ಬೇಡ –ಮನೆಯೊಳಗೆ ಯಾವುದಾದರೂ ಒಂದು ರೀತಿಯಲ್ಲಿ ನೆಗೆಟಿವ್ ಎನರ್ಜಿ ಬರುತ್ತದೆ. ಹೀಗೆ ಇವುಗಳು ಬಾರದಂತೆ ತಡೆಯಲು ಹಲವು ಮಾರ್ಗಗಳು ಇವೆ. ಮೊದಲನೆಯದಾಗಿ ಮನೆಯಲ್ಲಿ ತುಳಸಿ ಗಿಡವನ್ನು ನೆಡಬೇಕು. ಈ ಗಿಡವು ಕೆಟ್ಟ ಶಕ್ತಿಯು ಮನೆಯನ್ನು ಪ್ರವೇಶಿಸಲು ಬಿಡುವುದಿಲ್ಲ. ಜೊತೆಗೆ ಗಂಗಾಜಲವನ್ನು ಕಾಲ ಕಾಲಕ್ಕೆ ಮನೆಯೊಳಗೆ ಸಿಂಪಡಿಸಬೇಕು. ಪೂಜೆ ಮತ್ತು ಆರತಿಯನ್ನು ಮಾಡುವಾಗ ಘಂಟೆ, ಜಾಗಟೆಯನ್ನು ಬಾರಿಸಬೇಕು.

ದೃಷ್ಟಿ ನಿವಾಳಿಸುವ ಬಗ್ಗೆ ತಿಳಿಯೋಣ–ದೃಷ್ಟಿ ನಿವಾರಣೆಗೆ ವಾರಶುದ್ಧಿಯನ್ನು ನೋಡಬೇಕು ಎಂದು ಹೇಳಲಾಗುತ್ತದೆ. ಅಂದರೆ, ಭಾನುವಾರ, ಗುರುವಾರ , ಹುಣ್ಣಿಮೆ , ಅಮಾವಾಸ್ಯೆಯಂದು ದೃಷ್ಟಿ ನಿವಾಳಿಸಿದರೆ ಶ್ರೇಷ್ಠ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಇನ್ನು ಚಿಕ್ಕವರು ಹಿರಿಯರ ದೃಷ್ಟಿ ತೆಗೆಯಲು ಬರುವುದಿಲ್ಲ. ದೊಡ್ಡವರು ಚಿಕ್ಕವರ ದೃಷ್ಟಿ ನಿವಾಳಿಸಬೇಕು. ಮನೆಯಲ್ಲಿ ವಿಷ್ಣುಸಹಸ್ರನಾಮ ಪಠಣ ಅಥವಾ ಶ್ರವಣ ಮಾಡುವುದರಿಂದ ಕೆಟ್ಟಶಕ್ತಿಯು ಮನೆಯನ್ನು ಪ್ರವೇಶಿಸುವುದಿಲ್ಲ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago