ಇದನ್ನು ರಾತ್ರಿ ನೀರಿನಲ್ಲಿ ನೆನಸಿ ಬೆಳಗ್ಗೆ ಕುಡಿದರೆ ನಿಮ್ಮ ಹಲವಾರು ರೋಗಗಳನ್ನು ಗುಣಪಡಿಸುತ್ತದೆ ಹಾಗು ನಿಮ್ಮನ್ನು ಅರೋಗ್ಯವಂತರಾಗಿಸುತ್ತದೆ.ಇದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನಿಮಿಯ ಸಮಸ್ಸೆಗೆ ಇದು ಉತ್ತಮ. ಶುಗರ್ ಕೂಲೆಸ್ಟ್ರಿಲ್ ದೇಹದ ತೂಕ ಹೆಚ್ಚಾಗುವುದು, ಕೀಲು ನೋವು ಸೊಂಟ ನೋವು ಆಜೀರ್ಣತೆ ಹೃದಯದ ಸಮಸ್ಸೆ ಹೀಗೆ ಯಾವುದೇ ಅನಾರೋಗ್ಯ ಸಮಸ್ಸೆ ಇರಲಿ ನೀವು ಇದನ್ನು ಕುಡಿಯುವುದರಿಂದ ನಿಮ್ಮ ಹತ್ತಿರವು ಈ ಎಲ್ಲಾ ಸಮಸ್ಸೆಗಳು ಸುಳಿಯುವುದಿಲ್ಲ.
ಕಪ್ಪು ಜೀರಿಗೆಯನ್ನು ಕಾಳಾಜೀರಾ (Nigella Seeds), ಕಲೋಂಜಿ, ಕರಿ ಜೀರಿಗೆ ಅಂತಲೂ ಕರೆಯುತ್ತಾರೆ. ಈ ಕಪ್ಪು ಜೀರಿಗೆ ಅಡುಗೆಯ ರುಚಿಯನ್ನು ಹೆಚ್ಚಿಸುವ ಮತ್ತು ಪರಿಮಳ ನೀಡುವ ಗುಣವನ್ನು ಹೊಂದಿದೆ. ಇದು ಕೇವಲ ಅಡುಗೆ ರುಚಿಯನ್ನು ಹೆಚ್ಚಿಸುವ ಗುಣ ಮಾತ್ರವಲ್ಲ, ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ಆರೋಗ್ಯದ ದೃಷ್ಟಿಯಿಂದ ಇದು ಬಹಳ ಒಳ್ಳೆಯದು. ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಮ್ ಮತ್ತು ಪೊಟ್ಯಾಶಿಮ್ನಂತಹ ಪೋಷಕಾಂಶಗಳಿಂದ ಕೂಡಿರುವ ಕಪ್ಪು ಜೀರಿಗೆ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂದು ನೀವೂ ತಿಳಿಯಿರಿ.
ಜ್ಞಾಪಕ ಶಕ್ತಿ ವೃದ್ಧಿಸುವುದು (Memory Power)–ಇತ್ತೀಚೆಗೆ ಜ್ಞಾಪಕ ಶಕ್ತಿ ಯಾಕೋ ಕಡಿಮೆಯಾಗುತ್ತಿದೆ ಎಂದು ಹಲವರು ಮಾತನಾಡಿಕೊಳ್ಳುತ್ತಾರೆ. ಅಂತವರಿಗೆ ಈ ಕಪ್ಪು ಜೀರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ಜೇನುತುಪ್ಪದೊಂದಿಗೆ ಕಪ್ಪು ಜೀರಿಗೆಯ 7 ರಿಂದ 8 ಬೀಜಗಳನ್ನು ಸೇವಿಸಬೇಕು. ತಿಂದ ನಂತರ ಅರ್ಧ ಘಂಟೆಯವರೆಗೆ ಏನನ್ನೂ ಸೇವಿಸಬಾದರು. ಇದನ್ನು ಪ್ರತಿದಿನ ಮಾಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ಜೊತೆಗೆ ಏಕಾಗ್ರತೆ ಕೂಡಾ ಹೆಚ್ಚಾಗುವುದು.
ಹೃದಯಕ್ಕೆ ಪ್ರಯೋಜನಕಾರಿ–ಕಪ್ಪು ಜೀರಿಗೆ ಹೃದಯದ ಆರೋಗ್ಯ ದೃಷ್ಟಿಯಿಂದ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಪ್ರತಿದಿನ ಸುಮಾರು 10 ರಿಂದ 12 ಕಪ್ಪು ಜೀರಿಗೆಯನ್ನು ಹಸು ಅಥವಾ ಮೇಕೆ ಹಾಲಿನೊಂದಿಗೆ ತೆಗೆದುಕೊಂಡರೆ ಹೃದಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಹೃದಯ ಸಂಬಂಧಿ ಸಮಸ್ಯೆಗಳು ಕಡಿಮೆಯಾಗುತ್ತದೆ ಮತ್ತು ಬಿಪಿ ನಿಯಂತ್ರಣದಲ್ಲಿರುತ್ತದೆ.
ಕಣ್ಣಿನ ಆರೋಗ್ಯ–ಕಪ್ಪು ಜೀರಿಗೆ ನಿಯಮಿತವಾಗಿ ಸೇವಿಸುವುದರಿಂದ ದೃಷ್ಟಿ ಸುಧಾರಿಸುತ್ತದೆ. ಮಾತ್ರವಲ್ಲದೆ ಕಣ್ಣಿನಲ್ಲಿ ಹೆಚ್ಚು ನೀರು ಬರುತ್ತಿರುವವರಿಗೆ ಅಥವಾ ಕಣ್ಣು ಸದಾ ಕೆಂಪಾಗಿರುವವರಿಗೆ ಕಪ್ಪು ಜೀರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ತೂಕ ಕಡಿಮೆಗೊಳಿಸುವುದು–ದಪ್ಪ ಇರುವವರು ಕಪ್ಪು ಜೀರಿಗೆಯನ್ನು ತಿಂದರೆ ತೂಕವನ್ನು ಕಡಿಮೆಗೊಳಿಸಬಹುದು. ಒಂದು ಬಟ್ಟಲಿನಲ್ಲಿ ಕಪ್ಪು ಜೀರಿಗೆಯನ್ನು ತೆಗೆದುಕೊಂಡು ಅದಕ್ಕೆ ನಿಂಬೆರಸ ಹಿಂಡಿ, ಮಿಶ್ರಣ ಮಾಡಬೇಕು. ಮಿಶ್ರಣವನ್ನು ಎರಡು ದಿನಗಳ ಕಾಲ ಬಿಸಿಲಿನಲ್ಲಿ ಒಣಗಿಸಿ. ಪ್ರತಿದಿನ 8 ರಿಂದ 10 ಬೀಜಗಳನ್ನು ಸೇವಿಸಿ. ಕೆಲವೇ ದಿನಗಳಲ್ಲಿ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಸ್ವಲ್ಪ ಕಪ್ಪು ಜೀರಿಗೆ ಪುಡಿ ಮತ್ತು ಒಂದು ಚಮಚ ಜೇನುತುಪ್ಪವನ್ನು ನಿಂಬೆ ರಸದಲ್ಲಿ ಬೆರೆಸಿ ದಿನಕ್ಕೆ ಎರಡು ಬಾರಿ ಕುಡಿದರೂ ಕೂಡಾ ತೂಕ ಕಡಿಮೆಯಾಗುತ್ತದೆ.
ಹೆರಿಗೆಯಾದ ಮಹಿಳೆಯ ಶಕ್ತಿಯನ್ನು ಹೆಚ್ಚಿಸುವುದು–ಹೆರಿಗೆಯ ನಂತರ ಮಹಿಳೆಯರ ದೈಹಿಕ ಸಾಮರ್ಥ್ಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ಹೀಗಾಗಿ ಸಾಮರ್ಥ್ಯವನ್ನು ಹೆಚ್ಚಿಕೊಳ್ಳಲು ಸೌತೆಕಾಯಿ ರಸದೊಂದಿಗೆ ಕಪ್ಪು ಜೀರಿಗೆಯನ್ನು ಸೇವಿಸದರೆ ಒಳ್ಳೆಯದು. ಕಲೋಂಜಿಯನ್ನು ನೀರಿನೊಂದಿಗೆ ಸೇವಿಸುವುದರಿಂದ ಲ್ಯುಕೋರಿಯಾ, ಮುಟ್ಟು ನೋವು (period pain) ಮುಂತಾದ ಸಮಸ್ಯೆಗಳಿಗೂ ಪ್ರಯೋಜನಕಾರಿ.
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…